ಎಲ್ಲೆಡೆ ಧಾರ್ಮಿಕ ಕಾರ್ಯ, ಚಿಂತನೆಗಳು ನಡೆದಾಗ ಮಾತ್ರ ಗ್ರಾಮಗಳು ಸುಧಾರಣೆಯಾಗಲು ಸಾಧ್ಯ: ಶ್ರೀಕಾಂತ ಕುಲಕರ್ಣಿ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಪ್ರಸಕ್ತ ದಿನಗಳಲ್ಲಿ ಧಾರ್ಮಿಕ ಚಿಂತನೆಗಳು ಅಗತ್ಯವಾಗಿದ್ದು, ಈ ದಿಶೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಪ್ರವಚನ ಸಹಕಾರಿಯಾಗಿದೆ. ಎಲ್ಲೆಡೆ ಧಾರ್ಮಿಕ ಕಾರ್ಯಗಳು ಹಾಗೂ ಚಿಂತನೆಗಳು ನಡೆಯಬೇಕು. ಅಂದಾಗ ಮಾತ್ರ ಗ್ರಾಮಗಳು ಸುಧಾರಣೆಯಾಗಲು ಸಾಧ್ಯವಾಗುತ್ತದೆ ಎಂದು ಕೃ.ಪ.ಸ.ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ಹೇಳಿದರು.

Advertisement

ಅವರು ರವಿವಾರ ಸಂಜೆ ಮಾರನಬಸರಿ ಗ್ರಾಮದ ಸರ್ವಧರ್ಮ ಸಮನ್ವಯ ಪೀಠದ ಧಾರ್ಮಿಕ ಪ್ರವಚನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರೊ. ಎಫ್.ಎಂ. ಹುಡೇದ ಹಾನಗಲ್ಲ ಕುಮಾರೇಶ್ವರರ ಕುರಿತು ಉಪನ್ಯಾಸ ನೀಡಿದರು. ಶಾಂತಮ್ಮ ಮರಾಠ ಅಧ್ಯಕ್ಷತೆ ವಹಿಸಿದ್ದರು. ಶಿವಮೂರ್ತಿ ಶ್ರೀಗಳು ಸಾನ್ನಿಧ್ಯ ಹಾಗೂ ಶಿವಯೋಗಿ ದೇವರು ಸಮ್ಮುಖ ವಹಿಸಿದ್ದರು. ಗದಿಗೆಯ್ಯ ದೇವರು ವಿರಕ್ತಮಠ ಪ್ರವಚನ ನೀಡಿದರು. ದಾಸೋಹ ಸೇವೆ ಸಲ್ಲಿಸಿದ ಮರಿಯಮ್ಮ ಅಯ್ಯಪ್ಪ ಹಾದಿಮನಿರವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ಮೆಹೆಬೂಬ ಮೋತೆಖಾನ್, ಎಸ್‌ಡಿಎಂಸಿ ಅಧ್ಯಕ್ಷ ಕೂಡ್ಲೆಪ್ಪ ಹಡಪದ, ಗ್ರಾ.ಪಂ ಸದಸ್ಯರಾದ ದಿಲ್‌ಶ್ಯಾದಬೇಗಂ ದೋಟಿಹಾಳ, ಹನಮವ್ವ ತಳವಾರ, ನ್ಯಾಯವಾದಿ ಭರತಕುಮಾರ ಹಾದಿಮನಿ, ನಿವೃತ್ತ ಶಿಕ್ಷಕ ಎಸ್.ಬಿ. ಪೂಜಾರ, ಚಂದ್ರಶೇಖರಯ್ಯ ಹಿರೇಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here