ಮಂಗಳೂರು:- ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.
ಮುಸ್ಲಿಮರನ್ನು ಒಲೈಸಿಲು ಸರ್ಕಾರ ಪೊಲೀಸರಿಗೆ ಒತ್ತಡ ತಂದಿದೆ. ಸುಹಾಸ್ ಶೆಟ್ಟಿ ಹತ್ಯೆಯ ದಿನ ಬಂದ್ಗೆ ಕರೆ ನೀಡಿರುವುದಕ್ಕೆ ಕೇಸ್ ಆಗಿತ್ತು. ಪ್ರಕರಣ ದಾಖಲಾಗಿ 20 ದಿನಗಳು ಕಳೆದುಹೋಗಿವೆ. ಈಗ ಬಂಧನ ಮಾಡಿರುವುದು ಯಾಕೆ? ಇವತ್ತಿನ ಘಟನೆ ಹಿನ್ನೆಲೆಯಲ್ಲಿ ಮುಸ್ಲಿಮರನ್ನು ಓಲೈಕೆ ಮಾಡಲು ಬಂಧಿಸಲಾಗಿದೆ. ಜೈಲಿಗೆ ಹಾಕಲ್ಲ ಅಂತ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಶರಣ್ ಪಂಪ್ವೆಲ್ ಅವರನನ್ನು ಜೈಲಿಗೆ ಹಾಕಿದರೆ ಮುಂದೆ ಆಗುವ ಘಟನೆಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಸರ್ಕಾರ ಮತ್ತು ಪೊಲೀಸರಿಗೆ ವಿಹೆಚ್ಪಿ ಮುಖಂಡ ಮುಖಂಡ ಪ್ರದೀಪ್ ಸರಿಪಲ್ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಮಂಗಳವಾರ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಕೊಲೆಯಾಗಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.