ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೇ 4ರಂದು ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ರಾಜ್ಯಗಳ ಜನತೆಯ ತೀರ್ಪು ಬಹಿರಂಗವಾಗಲಿದೆ.
ಚುನಾವಣಾ ಆಯೋಗದ ನಿಯಮಿತ ಪ್ರಕ್ರಿಯೆಯಂತೆ ಮೊದಲು ಅಂಚೆ ಮತಪತ್ರಗಳ ಎಣಿಕೆ, ಬಳಿಕ ಇವಿಎಂ ಮತಗಳ ಎಣಿಕೆ ನಡೆಯಲಿದೆ. ದೇಶದಾದ್ಯಂತ ಕಟ್ಟುನಿಟ್ಟಿನ ಭದ್ರತೆಯಲ್ಲಿ ಏಕಕಾಲದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
824 ಕ್ಷೇತ್ರಗಳ ಈ ಮಹಾ ಚುನಾವಣೆಯ ಫಲಿತಾಂಶ ಕೇವಲ ಸರ್ಕಾರ ರಚನೆಗೆ ಸೀಮಿತವಲ್ಲ — ರಾಷ್ಟ್ರಮಟ್ಟದ ರಾಜಕೀಯ ಶಕ್ತಿಪರೀಕ್ಷೆ. ಮಧ್ಯಾಹ್ನದೊಳಗೆ ಟ್ರೆಂಡ್ ಸ್ಪಷ್ಟವಾಗುವ ನಿರೀಕ್ಷೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ನೇರ ಪೈಪೋಟಿ ದೇಶದ ಗಮನ ಸೆಳೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಭಾವ ಪರೀಕ್ಷೆಗೆ ಇಳಿದಿದೆ.
ಇನ್ನೊಂದೆಡೆ ಅಸ್ಸಾಂನಲ್ಲಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಗಡಿಯನ್ನು ಕಾಪಾಡಿಕೊಳ್ಳಲು ಸಜ್ಜಾಗಿದೆ.
ಫಾಲ್ಟಾ ಕ್ಷೇತ್ರದಲ್ಲಿ ಅಕ್ರಮಗಳ ಹಿನ್ನೆಲೆಯಲ್ಲಿ ಮರು ಮತದಾನ ಆದೇಶಿಸಲಾಗಿದ್ದು, ಅದರ ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ.



