ಹಿಂದೂಗಳ ಪರ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ: ಕೆ.ಎಸ್.ಈಶ್ವರಪ್ಪ

0
Spread the love

ಶಿವಮೊಗ್ಗ: ಹಿಂದೂಗಳ ಪರ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಮುಸ್ಲಿಮರ ಒಂದಲ್ಲ ಒಂದು ಅನ್ಯಾಯ ಕಾಣುತ್ತಿದೆ.

Advertisement

ರೈತರು, ದೇವಸ್ಥಾನ, ಸಾಧು ಸಂತರು, ಪುರಾತತ್ವ ಇಲಾಖೆ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಮಾಡಿಕೊಂಡಿದ್ದಾರೆ. ವಕ್ಫ್ ಆಸ್ತಿ ಆಗಲು ಬಿಡಲ್ಲ ಎಂದು ಒಬ್ಬ ಕಾಂಗ್ರೆಸ್‌ನವರ ಬಾಯಲ್ಲಿ ಬರಲಿಲ್ಲ. ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದರು.

ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಿಪಕ್ಷಗಳು ರಾಜಕಾರಣ ಮಾಡುತ್ತೇವೆ ಎಂದು ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾನೆ. ಆದರೆ ಈ ಬಗ್ಗೆ ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಲಿಲ್ಲ ಎಂದು ಕಿಡಿಕಾರಿದರು.


Spread the love

LEAVE A REPLY

Please enter your comment!
Please enter your name here