HomeGadag Newsದೇಶದ ರಕ್ಷಣೆಗಾಗಿ ಮತ ಚಲಾಯಿಸಿ : ವೆಂಕಟೇಶಯ್ಯ

ದೇಶದ ರಕ್ಷಣೆಗಾಗಿ ಮತ ಚಲಾಯಿಸಿ : ವೆಂಕಟೇಶಯ್ಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತಮ್ಮ ಆಡಳಿತ ಅವಧಿಯಲ್ಲಿ ಸ್ಲಂ ನಿವಾಸಿಗಳಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ.

ಸ್ಲಂ ಜನರ ಭೂಮಿಯನ್ನು ಸಾರ್ವಜನಿಕ ಸಂಪನ್ಮೂಲವೆಂದು ಘೋಷಿಸಿದ ನರೇಂದ್ರ ಮೋದಿಯವರ ಸರ್ಕಾರ ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದೆ. ನಮ್ಮ ದೇಶದ ಸಂವಿಧಾನ ಮತ್ತು ದೇಶದ ರಕ್ಷಣೆಗಾಗಿ ಸ್ಲಂ ಜನರು ಮತ ಚಲಾಯಿಸಬೇಕೆಂದು ಗದಗ ಜಿಲ್ಲಾ ಡಿಎಸ್‌ಎಸ್ ಸಂಚಾಲಕ ವೆಂಕಟೇಶಯ್ಯ ಕರೆ ನೀಡಿದರು.

ಅವರು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ-2024ರ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಬಡವರಿಗೆ ಉಪಯೋಗವಾಗುವ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತರದೇ ಕೇಂದ್ರ ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡುವಂತ ಕೆಲಸವನ್ನು ಮಾಡಿದೆ ಎಂದರು.

ಪ್ರಗತಿಪರ ಚಿಂತಕ ಬಸವರಾಜ ಪೂಜಾರ ಮಾತನಾಡಿದರು. ಸ್ಲಂ ಸಮಿತಿ ಪದಾಧಿಕಾರಿಗಳಾದ ರವಿಕುಮಾರ ಬೆಳಮಕರ, ಅಶೋಕ ಕುಸಬಿ, ಮೆಹರುನಿಸಾ ಢಾಲಾಯತ, ಇಬ್ರಾಹಿಮ ಮುಲ್ಲಾ, ಶಿವಾನಂದ ಶಿಗ್ಲಿ, ಸಾಕ್ರುಬಾಯಿ ಗೋಸಾವಿ, ಮೆಹಬೂಬಸಾಬ ಬಳ್ಳಾರಿ, ಬಾಷಾಸಾಬ ಡಂಬಳ, ದಾದು ಗೋಸಾವಿ, ಖಾಜಾಸಾಬ ಇಸ್ಮಾಯಿಲನವರ, ಶಿವಪ್ಪ ಲಕ್ಕುಂಡಿ, ಸಲೀಮ ಬೈರಕದಾರ, ಚಂದ್ರಿಕಾ ರೋಣದ, ಅಫ್ರೋಜಾ ಹುಬ್ಬಳ್ಳಿ, ಶೊಸೀಲಮ್ಮ ಗೊಂದರ, ಫೈರುಜಾ ಹುಬ್ಬಳ್ಳಿ, ಮೆಹರುನಿಸಾ ಡಂಬಳ, ತಿಪ್ಪಮ್ಮ ಕೊರವರ, ಕೌಸರ ಬೈರಕದಾರ, ವಿಶಾಲಕ್ಷಿ ಹಿರೇಗೌಡ್ರ, ನಗೀನಾ ಯಲಗಾರ, ಪೀರಮ್ಮ ನದಾಫ, ಜೈತುನಬಿ ಶಿರಹಟ್ಟಿ, ಲಕ್ಷ್ಮಿ ಮಣವಡ್ಡರ, ಶೋಭಾ ಹಿರೇಮಠ, ಮಕ್ತುಮಸಾಬ ಮುಲ್ಲಾನವರ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img