HomeGadag Newsಹರ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನ

ಹರ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಮದಲ್ಲಿನ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆ ಊರುಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು `ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಕೂಲಿಕಾರ್ಮಿಕರಿಗೆ ಸ್ವಗ್ರಾಮದಲ್ಲಿಯೇ ನಿರಂತರವಾದ ಉದ್ಯೋಗವನ್ನು ಕಲ್ಪಿಸಲಾಗುವುದು. ಅದ್ದರಿಂದ ಉದ್ಯೋಗ ಖಾತ್ರಿ ಅಭಿಯಾನದಡಿ ಕೆಲಸ ಪಡೆಯಲು ನಮೂನೆ-06 ಅರ್ಜಿ ಸಲ್ಲಿಸಬೇಕು ಎಂದು ತಾ.ಪಂ ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು.

ಅವರು ತಾಲೂಕಿನ ಹರ್ತಿ ಗ್ರಾಮದಲ್ಲಿ ನರೇಗಾದಡಿ ಪ್ರಗತಿಯಲ್ಲಿದ್ದ ಬದು ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕೂಲಿಕಾರರೊಂದಿಗೆ ಮಾತನಾಡಿದರು.

ಎಡಿಪಿಸಿ ಕಿರಣಕುಮಾರ ಮಾತನಾಡಿ, ನರೇಗಾ ಯೋಜನೆಯ ನಿಯಮಾನುಸಾರ ಕೂಲಿ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಬೇಕು. ಹಾಜರಾತಿಯಲ್ಲಿ ಕಡ್ಡಾಯವಾಗಿ ಹೆಸರಿದ್ದ ಕೂಲಿಕಾರರು ಮಾತ್ರ ಕೆಲಸಕ್ಕೆ ಹಾಜರಾಗಬೇಕು ಹಾಗೂ ಕೆಲಸದ ಪ್ರಮಾಣಕ್ಕೆ ತಕ್ಕಂತೆ ಕೂಲಿ ಮೊತ್ತ ಪಾವತಿಸಲಾಗುವದು. ಗಂಡು ಮತ್ತು ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು ಎಂದು ತಿಳಿಸಿದರು.

2024ರ ಲೋಕಸಭೆ ಚುನಾವಣೆಯ ಪ್ರಯುಕ್ತ ಕಾಮಗಾರಿ ಸ್ಥಳದಲ್ಲಿ ಪಿಡಿಓ ಶಿವಲೀಲಾ ಅಂಗಡಿ ಹಾಜರಿದ್ದ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ಮತದಾರರು ಕೂಡ ಮತದಾನ ಮಾಡುವುದು ಅವರ ಆದ್ಯ ಕರ್ತವ್ಯವಾಗಿರುತ್ತದೆ. 18 ವರ್ಷ ತುಂಬಿದ ಯುವ ಮತದಾರರಿಗೆ VHA App ನಲ್ಲಿ ನೋಂದಾಯಿಸಿಕೊಳ್ಳಿ. ಮತದಾನ ಪ್ರಕ್ರಿಯೆಯಿಂದ ಯಾವೊಬ್ಬ ವ್ಯಕ್ತಿಯೂ ಹೊರಗುಳಿಯಬಾರದು ಎಂದು ತಿಳಿಸಿ, ಹಾಜರಿದ್ದ ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ನರೇಗಾ ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ಬಿಎಫ್‌ಟಿ ಸಿದ್ದಯ್ಯ ಹೀರೆಮಠ, ಗ್ರಾ.ಪಂ ಸಿಬ್ಬಂದಿಗಳು, ನರೇಗಾ ಕಾಯಕ ಬಂಧುಗಳು, ನರೇಗಾ ನೋಂದಾಯಿತ ಕೂಲಿಕಾರರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!