ವಿಜಯಸಾಕ್ಷಿ ಸುದ್ದಿ, ಗದಗ : ನೆಹರು ಯುವ ಕೇಂದ್ರ ಗದಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ SVEEP ಸಮಿತಿ ಗದಗ ಮತ್ತು ಪಂಡಿತ್ ಪಂಚಾಕ್ಷರ ಗವಾಯಿಗಳವರ ಶಿಕ್ಷಣ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Advertisement
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಾಧಿಕಾರಿ ಎನ್.ರಂಜನಿ ಮಾತನಾಡಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನವನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಪಂಚಾಯತಿಯ ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.