HomeGadag Newsಸುಭದ್ರ ಸರ್ಕಾರ ರಚನೆಗೆ ಮತದಾನವೇ ಶಕ್ತಿ : ಡಾ. ಹಂಪಣ್ಣ ಸಜ್ಜನರ

ಸುಭದ್ರ ಸರ್ಕಾರ ರಚನೆಗೆ ಮತದಾನವೇ ಶಕ್ತಿ : ಡಾ. ಹಂಪಣ್ಣ ಸಜ್ಜನರ

Spread the love

ವಿಜಯಸಾಕ್ಷಿ ಸುದ್ದಿ, ಗದಗ : ದೇಶದಲ್ಲಿ ನಡೆಯುವ ಚುನಾವಣೆಗಳು ಪ್ರಜಾಪ್ರಭುತ್ವದ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತವೆ. ಸಂವಿಧಾನ ನೀಡಿರುವ ಮತದಾನದ ಹಕ್ಕು ದೇಶದ ಸಂಸತ್ತನ್ನು ನಿರ್ಮಿಸುವ ಹಕ್ಕಾಗಿದೆ. ನಾವೆಲ್ಲ ಚುನಾವಣೆ ದಿನಗಳನ್ನು ಚುನಾವಣೆ ಪರ್ವ ಅಂದರೆ, ಅದು ದೇಶದ ಗರ್ವ ಎಂದೇ ಉಲ್ಲೇಖಿಸಬೇಕಾಗುತ್ತದೆ ಎಂದು ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಡಾ.ಹಂಪಣ್ಣ ಸಜ್ಜನರ ಅಭಿಪ್ರಾಯಪಟ್ಟರು.

ತಾಲೂಕಿನ ಅರಿಶಿಣಗೋಡಿ ಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕೈಗೊಂಡ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದರು.

ಸುಭದ್ರ ಸರ್ಕಾರ ರಚನೆಗೆ ಪ್ರತಿಯೊಬ್ಬರ ಮತದಾನ ಪ್ರಮುಖವಾಗಿದೆ. ಕಡ್ಡಾಯ ಮತದಾನ ರಕ್ತದಾನ, ಅನ್ನದಾನ ಸೇರಿದಂತೆ ಇನ್ನಿತರೆ ಯಾವುದೇ ದಾನಕ್ಕಿಂತ್ತಲೂ ಹೆಚ್ಚಿನ ದಾನವಾಗಿದೆ. ಕೂಲಿಕಾರರು ಎಲ್ಲರೂ ಮೇ 7ರಂದು ಮತ ಚಲಾಯಿಸಬೇಕು. ಸ್ವಂತ ಊರಿನಿಂದ ಬೇರೆ ಊರಿಗೆ ತೆರಳಿರುವ ತಮ್ಮ ಕುಟುಂಬ ಸದಸ್ಯರನ್ನು ಮತದಾನದ ದಿನ ಕರೆಸಿಕೊಂಡು ಮತದಾನ ಮಾಡಿಸಿ ಎಂದರು.

ಕಾಮಗಾರಿ ಸ್ಥಳದಲ್ಲಿದ್ದ 300ಕ್ಕೂ ಅಧಿಕ ಕೂಲಿಕಾರರಿಗೆ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ಸಂತೋಷಕುಮಾರ್ ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಮಾನವ ಸರಪಳಿ ರಚಿಸುವ ಮೂಲಕ ಕಡ್ಡಾಯ ಮತದಾನ ಬಗೆಗಿನ ಘೋಷಣೆಗಳನ್ನು ಕೂಗಿದರು.

ಸ್ವೀಪ್ ಚಟುವಟಿಕೆ ಕಾರ್ಯಕ್ರಮದಲ್ಲಿ ನರಗುಂದ ತಾ.ಪಂ ಇ.ಒ ಸೋಮಶೇಖರ್ ಬಿರಾದಾರ್, ಹಿರೇಕೊಪ್ಪ ಪಿಡಿಒ ಕೆ.ಎನ್. ಹದಗಲ್, ಜಿಲ್ಲಾ ಐಇಸಿ ಸಂಯೋಜಕ ವೀರಭದ್ರöಪ್ಪ ಸಜ್ಜನ, ತಾಲೂಕು ಐಇಸಿ ಸಂಯೋಜಕ ಸುರೇಶ ಬಾಳಿಕಾಯಿ, ತಾಂತ್ರಿಕ ಸಹಾಯಕ ಅಲ್ತಾಪ ಅಮೀನಬಾವಿ, ಬಿಎಫ್‌ಟಿ ಬಸವರಾಜ ಚಿಮ್ಮನಕಟ್ಟಿ, ಹಿರೇಕೊಪ್ಪ ಗ್ರಾ.ಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಚುನಾವಣೆ ಆಯೋಗ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಗಳು ಇಡೀ ದೇಶಾದ್ಯಂತ ಸ್ವೀಪ್ ಚಟುವಟಿಕೆ ಮೂಲಕ ಕಡ್ಡಾಯ ಮತದಾನ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತಿದೆ. ಎಲ್ಲ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಿದಾಗ ಮಾತ್ರ ಸ್ವೀಪ್ ಸಮಿತಿ ಕಾರ್ಯ ಯಶಸ್ವಿಯಾಗುತ್ತದೆ ಎಂದು ಡಾ.ಹಂಪಣ್ಣ ಸಜ್ಜನರ ಹೇಳಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!