ವಕ್ಫ್ ತಿದ್ದುಪಡಿ| ಮುಂದೆ ಆಗುವ ಅನಾಹುತಕ್ಕೆ ಕೇಂದ್ರವೇ ಹೊಣೆ – ಬೋಸರಾಜು!

0
Spread the love

ಬೆಂಗಳೂರು:- ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಪಾಸಾಗಿದ್ದು, ಮುಂದೆ ಆಗುವ ಅನಾಹುತಗಳಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಚಿವ ಎನ್ ಎಸ್ ಬೋಸರಾಜು ಹೇಳಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಅಂಗೀಕಾರ ಆಗಿರುವುದು ಇತಿಹಾಸದಲ್ಲಿ ಒಂದು ಕೆಟ್ಟ ದಿನ ಎಂದು ಸಚಿವ ಎನ್.ಎಸ್ ಬೋಸರಾಜು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ, ಆರ್‌ಎಸ್‌ಎಸ್ ಅವರ ಪ್ರಯತ್ನದಿಂದ ಈ ಮಸೂದೆ ತಂದಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳು ವಿಧೇಯಕವನ್ನು ವಿರೋಧ ಮಾಡಿದ್ದಾರೆ. ಜಂಟಿ ಸದನ ಸಮಿತಿಗೆ ಹೋದಾಗಲು ಸಮಿತಿಯ ಸಭೆಯಲ್ಲಿ ವಿರೋಧಿಸಿದ್ದಾರೆ. ತಮ್ಮ ಪ್ರಯತ್ನಕ್ಕೆ ಬಲ ತೋರಿಸಿ ಬಿಲ್ ಪಾಸ್ ಮಾಡಿಕೊಂಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ನರೇಂದ್ರ ಮೋದಿ ನಡೆದುಕೊಂಡಿದ್ದಾರೆ. ಗುರುವಾರ ಸಂಸತ್‌ನಲ್ಲಿ ನಡೆದಿರುವುದು ಕೆಟ್ಟ ದಿನ ಎಂದು ನಾವು ಭಾವಿಸುತ್ತೇವೆ. ಮುಂದೆ ಏನೇ ಪರಿಣಾಮ ಆದರೂ ಅದಕ್ಕೆ ಕೇಂದ್ರವೇ ಜವಾಬ್ದಾರಿವಹಿಸಬೇಕು ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here