ಬೆಂಗಳೂರು:- ರೈತರ ಜಮೀನಿಗೆ ವಕ್ಫ್ ಬೋರ್ಡ್ನಿಂದ ನೊಟೀಸ್ ವಿಚಾರದ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್ಗೆ ನೋಟಿಫಿಕೇಶನ್ ಆಗಿದೆ. 1,319 ಎಕರೆ ಮುಸ್ಲಿಂ ಸಮುದಾಯ ಸಂಘಟನೆಗಳ ಹೆಸರಲ್ಲಿದೆ ಎಂದರು.
ಡಿಸಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಿದೆ. ದಾಖಲಾತಿ ಇರುವ ರೈತರು ತಂದು ಡಿಸಿಗೆ ಕೊಡಬಹುದು. ದಾಖಲಾತಿ ಇದ್ದರೆ ಅವರಿಗೆ ಜಮೀನು ಸಿಕ್ಕೇ ಸಿಗುತ್ತದೆ. ಮಂಜೂರು ಆಗಿರೋ ಜಮೀನು ಯಾರಿಂದಲೂ ವಾಪಸ್ ಪಡೆಯುವುದಿಲ್ಲ ಎಂದರು.
ವಿಜಯಪುರದಲ್ಲಿ ವಕ್ಫ್ ಸಂಸ್ಥೆಗೆ ಸೇರಿದ ಜಮೀನು ಮತ್ತೊಂದು ಕಡೆ ರೈತರ ಜಮೀನು ಇದರ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದೇವೆ. ಈಗಾಗಲೇ ಎಂ ಬಿ ಪಾಟೀಲ್ ಹೇಳಿದ್ದಾರೆ. ಆದರೆ ವ್ಯವಸ್ಥಿತವಾಗಿ ವಿವಾದ ಮಾಡೋ ಕೆಲಸ ಆಗುತ್ತಿದೆ. 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ನೋಂದಣಿ ಆಗಿದೆ. 14,201 ಎಕರೆ ನೋಟಿಫಿಕೇಶನ್ ಆಗಿದೆ.
ಇದರಲ್ಲಿ 773 ಎಕರೆ ಮಾತ್ರ ವಕ್ಫ್ಗೆ ನೋಟಿಫಿಕೇಶನ್ ಆಗಿದೆ. ಕೆಲವು ದರ್ಗಾ, ಮಸೀದಿ ಸೇರಿದ ಜಾಗ ಇದೆ. 1,319 ಎಕರೆ ವಯಕ್ತಿಕ ಅನುಭೋಗದಲ್ಲಿ ಇಲ್ಲ. ಯಾರಿಗೂ ಮಂಜೂರು ಆಗಿಲ್ಲ. ಅವು ಮುಸ್ಲಿಂ ಸಮುದಾಯದ ಸಂಘಟನೆಗಳ ಹೆಸರಿನಲ್ಲಿ ಇವೆ. 11,835 ಎಕರೆ ರೈತರಿಗೆ ಉಳುವವನೇ ಭೂಮಿಯ ಒಡೆಯ ಅಡಿ ಮಂಜೂರು ಆಗಿದೆ ಎಂದು ತಿಳಿಸಿದರು.
ಯಾರಿಗೆ ನೊಟೀಸ್ ಕೊಡಬೇಕು ಎಂದು ವಕ್ಫ್ ಸಚಿವರು ಹೇಳಲಿಲ್ಲ. ರೈತರಿಗೆ ಮಂಜೂರಾಗಿರೋ ಜಮೀನು ವಾಪಸ್ ಪಡೆಯೋದು ಸರ್ಕಾರದ ಮುಂದೆ ಇಲ್ಲ. 121 ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ 41 ಜನರಿಗೆ ನೋಟಿಸ್ ಕೊಡಬೇಕಿತ್ತು. ಆದರೆ ನೋಟಿಸ್ ಕೊಡದೇ ಆಗಿದೆ. ಆದರೆ ತಹಶಿಲ್ದಾರರು ನೋಟಿಸ್ ಕೊಟ್ಟಿಲ್ಲ. ಹೀಗಾಗಿ ಎ ಸಿ ಅವರು ಅದನ್ನು ತಹಶಿಲ್ದಾರರಿಗೆ ವಾಪಸ್ ಕಳಿಸುತ್ತಾರೆ ಎಂದು ಹೇಳಿದರು.