ತುಮಕೂರು: ಆನ್ಲೈನ್ ಗೇಮ್ ಆಡಬೇಡ ಅಂತ ಬುದ್ದಿ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ಹೊರಪೇಟೆಯ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ.
Advertisement
ಟಿ.ಎಸ್.ಭರತ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಇತ್ತೀಚೆಗೆ ಆನ್ಲೈನ್ ಗೇಮ್ನಲ್ಲಿ 20 ಸಾವಿರ ರೂ. ಹಣ ಕಳೆದುಕೊಂಡಿದ್ದ. ಈ ವಿಚಾರ ಆತನ ತಾಯಿಗೆ ಗೊತ್ತಾಗಿ ಇನ್ನೂ ಆನ್ಲೈನ್ ಗೇಮ್ ಆಡಬೇಡ ಎಂದು ಬುದ್ಧಿ ಹೇಳಿದ್ದರು.
ಇದೇ ವಿಚಾರಕ್ಕೆ ಯುವಕ ತನ್ನ ಮನೆ ಬಳಿಯ ಹಳೆ ಹೆಂಚಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.