ಮಕ್ಕಳು ಹಠ ಮಾಡ್ತಾರೆ ಅಂತ ಬೇಕರಿ ತಿನಿಸು ಕೊಡೋ ಮುನ್ನ ಈ ಸ್ಟೋರಿ ನೋಡಿ!

0
Spread the love

ಮಂಡ್ಯ: ಮಕ್ಕಳು ಹಠ ಮಾಡ್ತಾರೆ ಅಂತ ನೀವು ಬೇಕರಿ ತಿನಿಸು ಅವರಿಗೆ ಕೊಡುತ್ತಿದ್ದರೆ ಈ ಸ್ಟೋರಿ ಮಿಸ್ ಮಾಡ್ದೆ ನೋಡಿ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬೇಕರಿಯಿಂದ ತಂದಿದ್ದ ಕಲುಷಿತ ಕೇಕ್ ತಿಂದು ಮಗು ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ.

Advertisement

ಆನಂದ್ ಎಂಬುವವರು ತಮ್ಮ ಮಗಳಿಗಾಗಿ ಪಟ್ಟಣದ ಕಾವೇರಿ ಬೇಕರಿಯಲ್ಲಿ ಕೇಕ್ ಖರೀದಿಸಿದ್ದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.

ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳು ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಹಾಗೂ ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾರೆ. ಕಿಚನ್ ಗಬ್ಬು ನಾರುತ್ತಿರೋದನ್ನು ಕಂಡು ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಬೇಕರಿ ಮಾಲೀಕ ಮಹೇಶ್​​ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.


Spread the love

LEAVE A REPLY

Please enter your comment!
Please enter your name here