ಇಂದಿನಿಂದ ಮುಜರಾಯಿ ವ್ಯಾಪ್ತಿಯ ದೇಗುಲಗಳಲ್ಲಿ ನೀರಿನ ಬಾಟಲ್, ಪ್ಲಾಸ್ಟಿಕ್ ನಿಷೇಧ : ರಾಮಲಿಂಗಾರೆಡ್ಡಿ

0
Spread the love

ರಾಮನಗರ: ಇಂದಿನಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ಸೇರಿದಂತೆ ಎಲ್ಲಾ ಬಗೆಯ ಬಳಕೆಯನ್ನು ನಿಷೇಧ ಮಾಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ.

Advertisement

ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.


Spread the love

LEAVE A REPLY

Please enter your comment!
Please enter your name here