ವಯನಾಡು ಭೂಕುಸಿತ ದುರಂತ; ಸಂತ್ರಸ್ತರ ಸಹಾಯಕ್ಕೆ ನಿಂತ ಮೆಗಾಸ್ಟಾರ್ ಫ್ಯಾಮಿಲಿ

0
Spread the love

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತರ ಸಂಖ್ಯೆ 350 ದಾಟಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಅವರಿಗಾಗಿ ಸತತ 6ನೇ ದಿನ ಹುಡುಕಾಟ ಮುಂದುವರಿದಿದೆ. ಈ ಮಧ್ಯೆ ಸಂತ್ರಸ್ತರ ಸಹಾಯಕ್ಕೆ ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಮುಂದಾಗಿದ್ದಾರೆ. ವಯನಾಡು ಭೂಕುಸಿತ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಚಿರಂಜೀವಿ ಮತ್ತು ರಾಮ್ ಚರಣ್ ಕೇರಳದ ಸಿಎಂ ಫಂಡ್‌ಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Advertisement

ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ವಿಕೋಪಕ್ಕೆ ನೂರಾರು ಜನರು ಪ್ರಾಣ ಕಳೆದುಕೊಂಡಿದಕ್ಕೆ ತೀವ್ರ ನೋವಾಗಿದೆ. ವಯನಾಡು ದುರಂತದ ಸಂತ್ರಸ್ತರಿಗಾಗಿ ನನ್ನ ಮನ ಮಿಡಿಯುತ್ತಿದೆ. ಚರಣ್ ಮತ್ತು ನಾನು ಕೇರಳದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಸಂಕಷ್ಟದಲ್ಲಿರುವವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರೆಲ್ಲರಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೆಗಾಸ್ಟಾರ್ ಚಿರಂಜೀವಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಚಿರಂಜೀವಿ, ರಾಮ್ ಚರಣ್ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here