ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಿಡುಗಡೆಯಾಗಿದ್ದಾರೆ. ಮೊಲದ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿಹೋಗಲ್ಲ, 2-3 ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೇನೆ ಎಂದು ಸ್ಪಷ್ಟಪಡಿಸಿದರು.
ಇನ್ನೂ ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ, ಷಡ್ಯಂತ್ರ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನಮಗೆ ಲೋಕೇಶ್ ಅಂತಾ ಒಬ್ಬನೇ ಕಾರು ಚಾಲಕ. ಹಾಸನದಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಕಪ್ಪುಚುಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ತಿಳಿಸಿದರು.