ಬೆಂಗಳೂರು:- ಸಚಿವ ಸಂಪುಟ ಸಭೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕನ್ನಡಪರ ಹೋರಾಟಗಾರರು, ರೈತ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ. ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್ ನಿರ್ಧಾರ ಮಾಡಿ ಈ ಕೇಸ್ ವಾಪಸ್ ಪಡೆಯೋ ಪ್ರಕ್ರಿಯೆ ಮಾಡಿದ್ದೇವೆ.
ಪೊಲೀಸ್ ಇಲಾಖೆ ಕೇಸ್ ವಾಪಸ್ ಪಡೆಯೋದು ಬೇಡ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಕ್ಯಾಬಿನೆಟ್ ಸಬ್ ಕಮಿಟಿ ಮತ್ತು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ ಕೇಸ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಕನ್ನಡ ಹೋರಾಟಗಾರರು, ರೈತರ ಹೋರಾಟದ ಕೇಸ್ಗಳನ್ನು ವಾಪಸ್ ಪಡೆಯೋಕೆ ನಮ್ಮ ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಆಗಿದ್ರೆ, ಸರ್ಕಾರದ ಆಸ್ತಿ ನಷ್ಟ ಆಗಿದ್ರೆ, ಅಂತಹ ಕೇಸ್ಗಳ ವಿಚಾರಣೆ ವಿಳಂಬವಾಗಿರಬಹುದು. ಆದರೆ ಕನ್ನಡಕ್ಕಾಗಿ ಹೋರಾಡಿದವರ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ವೈಯಕ್ತಿಕ ಕೇಸ್ಗಳ ಬಗ್ಗೆ ನಾನು ನೋಡಿಲ್ಲ ಎಂದರು.