ಬೆಂಗಳೂರು: ಒಳಜಗಳ ಬಿಟ್ಟು ನಾವು ಒಟ್ಟಾಗಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ. ಅದು ಸ್ಥಳೀಯ ಸಮಸ್ಯೆ. ನಾನು, ಜೋಶಿ, ಸಿ.ಟಿ ರವಿ ಸೇರಿ ಹಿರಿಯರು ಚರ್ಚೆ ಮಾಡಿದ್ದೇವೆ. ಪ್ರಮುಖರು ಕೂತು ಎಲ್ಲವನ್ನು ಸರಿ ಮಾಡುವ ಕೆಲಸ ಮಾಡ್ತಿದ್ದೇವೆ ಎಂದರು.
Advertisement
ಯಾವುದೇ ಸಮಯದಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆಗಳು ಬರಬಹುದು. ಬಿಜೆಪಿ ಜವಾಬ್ದಾರಿ ಜಾಸ್ತಿ ಇದೆ. ಒಳಜಗಳ ಬಿಟ್ಟು ನಾವು ಒಟ್ಟಾಗಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಬೇಕಿದೆ. ಇದಕ್ಕೆ ಎಲ್ಲರೂ ಒಟ್ಟಾಗಿ ಹೋಗಬೇಕಿದೆ. ಈ ನಿಟ್ಟಿನಲ್ಲಿ ನಾವು ಎಲ್ಲರ ಮನವೊಲಿಕೆ ಮಾಡುತ್ತೇವೆ. ಒಟ್ಟಾಗಿ ಹೋಗುತ್ತೇವೆ ಎಂದು ತಿಳಿಸಿದರು.