ಬೆಳಗಾವಿ: ಮೂರು ಕ್ಷೇತ್ರಗಳಲ್ಲೂ ಖಂಡಿತವಾಗಲೂ ಗೆಲುವು ಸಾಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಸೈನಿಕ ಶಾಲೆ ನಿರ್ಮಾಣ ಮಾಡಿದ್ದೇವೆ. ಅದೇ ರೀತಿ ಕಿತ್ತೂರಿನಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಒತ್ತಾಯವಿದ್ದು,
Advertisement
ಅದನ್ನು ಕೂಡ ಮಾಡಿಕೊಡುತ್ತೇವೆ. ಇನ್ನು ಕಿತ್ತೂರಿಗೆ ಬರಬೇಕಿರುವ ಎರಡ್ಮೂರು ಕಚೇರಿಗಳನ್ನು ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು. ಉಪಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರ ಮೂರು ಕ್ಷೇತ್ರಗಳಲ್ಲೂ ಖಂಡಿತವಾಗಲೂ ಗೆಲುವು ಸಾಧಿಸುತ್ತೇವೆ ಎಂದು ಇದೇ ವೇಳೆ ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.