ರೈತರಿಗೆ ಕೊಟ್ಟ ನೋಟಿಸ್ ಶೀಘ್ರವೇ ವಾಪಸ್ ಪಡೆಯುತ್ತೇವೆ: CM ಸಿದ್ದರಾಮಯ್ಯ!

0
Spread the love

ಬೆಂಗಳೂರು: ರೈತರಿಗೆ ವಕ್ಫ್ ಬೋರ್ಡ್ ಕೊಟ್ಟ ನೋಟಿಸ್ ಶೀಘ್ರವೇ ವಾಪಸ್ ಪಡೆಯುತ್ತೇವೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿ ಎತ್ತುತ್ತಿರುವ ಬಗ್ಗೆ ಉತ್ತರಿಸಿ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here