ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

0
Spread the love

ಬಳ್ಳಾರಿ: ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಹೇಳಿದ್ದಾರೆ.

Advertisement

ಜನವರಿ 16ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದು ಅವರು ಹೇಳಿದರು. 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ನಮ್ಮ ಮೇಲೆ ಲಾಠಿಚಾರ್ಜ್​​ ಮಾಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್​​ ಮಾಡಿದೆ.

ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here