ಬೆಲೆ ಏರಿಕೆ ವಿರೋಧಿಸಿ ಏ.2ರಂದು ಅಹೋರಾತ್ರಿ ಧರಣಿ ಮಾಡುತ್ತೇವೆ: ಬಿವೈ ವಿಜಯೇಂದ್ರ

0
Spread the love

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಏ.2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

Advertisement

ರಾಜ್ಯ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ವಾಪಸ್ ಪಡೆಯಲು ಹೋರಾಟ ನಡೆಸಲಿದ್ದೇವೆ. ಏ.2ರಂದು ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ.

ಹಾಲಿ ಮಾಜಿ ಶಾಸಕರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗಿಯಾಗುತ್ತಾರೆ. ಏ.2ರಂದು ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಏ.5ರಂದು ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ರಸ್ತೆಗೆ ಇಳಿದು ಹೋರಾಟ ಮಾಡಲಿದೆ ಎಂದರು.

 


Spread the love

LEAVE A REPLY

Please enter your comment!
Please enter your name here