ಬೆಂಗಳೂರು: ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿಗೆ ಯಾರ ವಿರೋಧವೂ ಇಲ್ಲ. ಈಗ ಇರುವ ವರದಿಯಲ್ಲಿ ಅನೇಕ ಸಮುದಾಯಗಳಿಗೆ ಹಲವು ಆತಂಕಗಳು ಇವೆ. ಈ ಆತಂಕಗಳನ್ನು ನಿವಾರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಇದನ್ನು ಚರ್ಚೆ ಮಾಡುತ್ತೇವೆ. ನನ್ನ ಅಭಿಪ್ರಾಯ ಕ್ಯಾಬಿನೆಟ್ನಲ್ಲಿ ಹೇಳುತ್ತೇನೆ.
Advertisement
ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ಇನ್ನೂ ಸಚಿವ ಸಂಪುಟ ಸಭೆ ನಡೆಯುತ್ತದೆ. ನನ್ನ ಅಭಿಪ್ರಾಯವನ್ನು ಸಚಿವ ಸಂಪುಟ ಸಭೆಯಲ್ಲಿ ಹೇಳುತ್ತೇನೆ. ವರದಿ ಬಗ್ಗೆ ಆತಂಕ ಇತ್ತು ನಿಜ ಆದರೆ ಇಡೀ ದೇಶದಲ್ಲಿ ಜಾತಿಗಣತಿ ಆಗಬೇಕು. ನಮ್ಮ ಪ್ರಣಾಳಿಕೆಯಲ್ಲೂ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿಳಿಸಿದರು.