ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಪರಿಷ್ಕರಣೆ ಮಾಡುತ್ತೇವೆ: ಸಚಿವ ಕೆ.ಹೆಚ್.ಮುನಿಯಪ್ಪ

0
Spread the love

ಬೆಂಗಳೂರು:  ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ.

Advertisement

ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನೂ ಇದೇ ವೇಳೆ ಯಾದಗಿರಿಯಲ್ಲಿ  ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here