ಶ್ರೀರಾಮುಲು ಪಕ್ಷ ಸಿದ್ಧಾಂತ ಒಪ್ಪಿ ಕಾಂಗ್ರಸ್‌ʼಗೆ ಬಂದರೆ ಸ್ವಾಗತ ಮಾಡ್ತೇವೆ: ಕೆ.ಎನ್ ರಾಜಣ್ಣ

0
Spread the love

ಬೆಂಗಳೂರು: ಶ್ರೀರಾಮುಲು ಪಕ್ಷ ಸಿದ್ಧಾಂತ ಒಪ್ಪಿ ಕಾಂಗ್ರಸ್‌ʼಗೆ ಬಂದರೆ ಸ್ವಾಗತ ಮಾಡ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ, ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಯೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು.

Advertisement

ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆಗೆ ನಾವು ಒತ್ತಡ ಹಾಕಲ್ಲ. ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಮಾಡ್ತೇವೆ. ರಾಜಕಾರಣ ನಿಂತ ನೀರಲ್ಲ. ಹಾಗೆಯೇ ಮೇಲಿನಿಂದ ಹರಿಯುವ ನೀರನ್ನು ಕೆಳಗೆ ನಿಂತು ನೋಡಲು ಆಗೋದಿಲ್ಲ ಎಂದು ಹೇಳಿದರು.

ಇದೇ ವೇಳೆ ಶಾಸಕರಿಗೆ ಅನುದಾನ ಬಿಡುಗಡೆ ಕೊರತೆ ವಿಚಾರವಾಗಿ ಮಾತನಾಡಿ, ಶಾಸಕರು ಕೇಳುತ್ತಾ ಇರೋದು ನ್ಯಾಯ ಸಮ್ಮತವಾಗಿಯೇ ಇದೆ. ಶಾಸಕರು ಅವರ ಮನೆಗೆ ಏನೂ ಅನುದಾನ ಕೇಳ್ತಿಲ್ಲ. ಹಂತ-ಹಂತವಾಗಿ ಅವರಿಗೆ ಅನುದಾನ ಬಿಡುಗಡೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here