HomeGadag Newsಬದ್ಧತೆಯೊಂದಿಗೆ ಜ್ಞಾನ ಸಂಪತ್ತು ಗಳಿಸಬೇಕು: ಮುಕುಂದ್ ಗಲಗಲಿ

ಬದ್ಧತೆಯೊಂದಿಗೆ ಜ್ಞಾನ ಸಂಪತ್ತು ಗಳಿಸಬೇಕು: ಮುಕುಂದ್ ಗಲಗಲಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಶೈಕ್ಷಣಿಕ ಜ್ಞಾನ ಮನುಷ್ಯನ ಮೂರನೇ ಕಣ್ಣಾಗಿದ್ದು, ಉನ್ನತ ಗುರಿ ಸಾಧನೆಗಾಗಿ ವಿದ್ಯಾರ್ಥಿ ದಿಸೆಯಲ್ಲಿಯೇ ಸತತಾಭ್ಯಾಸ, ಶಿಸ್ತು, ಬದ್ಧತೆಯೊಂದಿಗೆ ಜ್ಞಾನ ಸಂಪತ್ತು ಗಳಿಸಬೇಕು ಎಂದು ಮುಂಬೈನ ಝೀ ಎಂಟರ್‌ಟೈನ್ಮೆಂಟ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಮುಕುಂದ್ ಗಲಗಲಿ ಹೇಳಿದರು.

ಅವರು ಪಟ್ಟಣದ ಶ್ರೀಮತಿ ಕಮಲಾ ಶ್ರೀ ವೆಂಕಪ್ಪ ಎಂ.ಅಗಡಿ ಇಂಜಿನಿಯರಿAಗ್ ಕಾಲೇಜಿನ 21ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಪ್ರತಿಭಾನ್ವಿತ, ಕೌಶಲ್ಯತೆಯುಳ್ಳ ಇಂಜಿನಿಯರಿAಗ್ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ತಾಂತ್ರಿಕ ಶಿಕ್ಷಣದಲ್ಲಿ ಹೊಸ ಸಂಶೋಧನೆ ಮತ್ತು ಅವಿಷ್ಕಾರಗಳ ಮೂಲಕ ದೇಶದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಮಾಡುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಬೇಕು. ನಿಮ್ಮ ಜೀವನದ ಉನ್ನತಿ ಮತ್ತು ಪ್ರಗತಿಯ ರೂವಾರಿಗಳು ನೀವೇ ಆಗಿದ್ದು, ಆಯ್ದ ವಿಭಾಗದಲ್ಲಿ ಶೃದ್ಧೆ, ಸತತಾಭ್ಯಾಸ, ಸ್ಪಷ್ಟ ಗುರಿಯೊಂದಿಗೆ ಪರಿಶ್ರಮ ಪಟ್ಟರೆ ಯಶಸ್ಸು ಲಭಿಸುತ್ತದೆ.

ಹೆತ್ತ ತಂದೆ ತಾಯಿ, ಕಲಿಸಿದ ಗುರು ಮತ್ತು ಕಾಲೇಜಿಗೆ ಉತ್ತಮ ಹೆಸರನ್ನು ತರುವ ಕಾರ್ಯ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಮಾಹಿತಿ-ತಂತ್ರಜ್ಞಾನದ ಶಿಕ್ಷಣ ಸಿಗಬೇಕೆಂಬ ಸದುದ್ದೇಶದಿಂದ ಹುಟ್ಟೂರಿನಲ್ಲಿ ಸ್ಥಾಪಿಸಿದ ಇಂಜಿನಿಯರಿAಗ್ ಕಾಲೇಜಿನ ವಿವಿಧ ವಿಭಾಗಗಳಲ್ಲಿ 1400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೇ ಆಸ್ಪತ್ರೆ, ದೇವಸ್ಥಾನ ನಿರ್ಮಿಸಿರುವ ಅಗಡಿ ಕುಟುಂಬದ ಕಾರ್ಯ ಪ್ರಶಂಸನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಚೇರಮನ್ ಹರ್ಷವರ್ಧನ ವಿ.ಅಗಡಿ ಮಾತನಾಡಿ, ಸಾಧನೆ ಸಾಧಕರ ಸ್ವತ್ತಾಗಿದ್ದು ಅಬ್ದುಲ್ ಕಲಾಂ, ನರೇಂದ್ರ ಮೋದಿ ಸೇರಿ ಶ್ರೇಷ್ಠ ಸಾಧಕರನ್ನು ಪ್ರೇರಣೆಯಾಗಿಸಿಕೊಂಡು ದೇಶವೇ ಗುರುತಿಸುವಂತಹ ಸಾಧನೆಯ ತುಡಿತದತ್ತ ವಿದ್ಯಾರ್ಥಿಗಳು ಚಿತ್ತ ಹರಿಸಬೇಕು. ಜೀವನ ಸರಳ ದಾರಿಯಲ್ಲ. ಇಂದಿನ ಸ್ಫರ್ಧಾತ್ಮಕ ಮತ್ತು ಡಿಜಿಟಲ್ ಯುಗದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಹೊಸ ಅವಿಷ್ಕಾರಗಳ ಕಲ್ಪನೆ ಮತ್ತು ಇಂಗ್ಲೀಷ್ ಭಾಷೆಯ ಜ್ಞಾನ ಅಗತ್ಯವಾಗಿದ್ದು, ಪರಸ್ಪರ ಭಾಷಾ ಸಂವಹನದ ಮೂಲಕ ಭಾಷೆಯ ಜ್ಞಾನ ಹೊಂದಬೇಕು. ಅದಕ್ಕಾಗಿ ನಿಮ್ಮಲ್ಲಿರುವ ಕೀಳರಿಮೆ ಮರೆತು ಆತ್ಮವಿಶ್ವಾಸ ಹೊಂದಬೇಕು. ಕಾಲೇಜಿನ ಬೆಳವಣಿಗೆಯಲ್ಲಿ ಕಾಲೇಜಿನ ಬೋಧಕ ಭೋದಕೇತರ ಸಿಬ್ಬಂದಿಗಳ ಶ್ರಮವಿದೆ. ಪಿಯು ಕಾಲೇಜಿಗೆ ಪ್ರತ್ಯೇಕ ಕಟ್ಟಣ ನಿರ್ಮಾಣ ಕಾರ್ಯ ಪ್ರಾರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಹೈಸ್ಕೂಲ್ ಶಿಕ್ಷಣವನ್ನೂ ಪ್ರಾರಂಭಿಸಲಾಗುವುದು ಎಂದರು.

ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಪಾಲಕರು, ಗೌರವಾನ್ವಿತರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದಿವ್ಯಶ್ರೀ, ನಿಶಾ, ಶ್ರೀಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ನಿರ್ದೇಶಕರಾದ ಗೀತಾ ಎಚ್ ಅಗಡಿ, ಸಮೀರಾನಂದ ಅಗಡಿ, ಟ್ರಸ್ಟಿ ಶಿಶಿರ ದೇಸಾಯಿ ಮಾತನಾಡಿದರು. ದೇಶ-ವಿದೇಶಗಳ ಪ್ರತಿಷ್ಠಿತ ಕಂಪನಿಗಳು ಕೊಡಮಾಡಿದ ಪ್ರತಿಭಾ ಶಿಷ್ಯವೇತನ ಮತ್ತು ಪಾರಿತೋಷಕ ವಿತರಿಸಲಾಯಿತು. ಇಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯ ಡಾ.ಪರಶುರಾಮ ಬಾರ್ಕಿ, ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಎನ್. ಹಯವದನ, ಅಗಡಿ ಸನ್‌ರೈಸ್ ಆಸ್ಪತ್ರೆಯ ಡಾ. ರಾಜಶೇಖರ ಮೂಲಿಮನಿ ವಾರ್ಷಿಕ ಸಾಧನೆಯ ವರದಿ ವಾಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!