ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀಮತಿ ಮನೋರಮಾಬಾಯಿ ಮೋಹನ್ ಕುಡತರಕರ್ ಫೌಂಡೇಶನ್ ಮನೋರಮಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Advertisement

ಪ್ರಾಚಾರ್ಯರಾದ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ. ಅಭ್ಯಾಸಕ್ಕೆ ಪೂರಕವಾದ ವಾತವರಣ ಮಹಾವಿದ್ಯಾಲಯದಲ್ಲಿದೆ. ಉತ್ತಮವಾದ ಗ್ರಂಥಾಲಯವಿದೆ. ವಿದ್ಯಾರ್ಥಿಗಳೆಲ್ಲರೂ ಶಿಸ್ತು, ಸಂಯಮದಿಂದ ವರ್ತಿಸಿ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸಾಗಿರಿ ಎಂದು ಶುಭ ಹಾರೈಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಕೀಶೋರ ಮುದಗಲ್ಲ ಮಾತನಾಡಿ, ವಿದ್ಯಾರ್ಥಿಗಳು ಸಂಕೋಚವಿಲ್ಲದೆ, ನಿರ್ಭಯದಿಂದ ಅಧ್ಯಯನ ಮಾಡಿ, ತಂದೆ-ತಾಯಿಗಳ ಪ್ರೀತಿಗೆ ಪಾತ್ರರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ನಿರ್ದೇಶಕರುಗಳಾದ ಸಂಜಯಕುಮಾರ ಕುಡತರಕರ, ಚೇತನ ಕುಡತರಕರ ಹಾಗೂ ಪಿಯುಸಿ ಸಂಯೋಜಕರಾದ ಪ್ರೊ. ಶಾಹಿದಾ ಶಿರಹಟ್ಟಿ, ಪ್ರೊ. ಅಲ್ವೀನಾ ಡಿ, ಪ್ರೊ. ಸವಿತಾ ಪೂಜಾರ, ಪ್ರೊ. ಚೈತ್ರಾ ಡಿ, ಉಮಾದೇವಿ ದಿನ್ನಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here