ನಿಮ್ಹಾನ್ಸ್’ನಲ್ಲಿ ಮಗು ಸಾವು ಘಟನೆ ಸಂಬಂಧ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು..?

0
Spread the love

ಬೆಂಗಳೂರು:– ನಿಮ್ಹಾನ್ಸ್​​ನಲ್ಲಿ ಮಗು ಸಾವು ಘಟನೆ ಸಂಬಂಧ ವರದಿ ಕೇಳಿದ್ದು, ಬಳಿಕ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿಮ್ಹಾನ್ಸ್​ನಲ್ಲಿ ಹಾಸನ ಮೂಲದ ಮಗು ಸಾವು ಮತ್ತು ಪ್ರತಿಭಟನೆ ವಿಚಾರವಾಗಿ ವರದಿ ಕೇಳಿದ್ದೇನೆ. ಅಧಿಕಾರಿಗಳು ವರದಿ ಕೊಟ್ಟ ನಂತರ ಮುಂದೇನು ಮಾಡಬೇಕೆಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

Advertisement

ನಮ್ಮ‌ ಕಡೆಯಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ ಅಂತ ವೈದ್ಯರು ಹೇಳಿದ್ದಾರೆ. ಎರಡೂ ಕಡೆಯವರ ಜೊತೆ ಮಾತನಾಡುತ್ತೇವೆ. ಲೋಪಗಳು ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ನಿಮ್ಹಾನ್ಸ್ ಮೇಲೆ ಬಹಳ ಒತ್ತಡ ಇದೆ. ಸಾಕಷ್ಟು ರೋಗಿಗಳು ರಾಜ್ಯಾದ್ಯಂತ ಬರುತ್ತಾರೆ. ಕೆಲವೊಮ್ಮೆ ಬೆಡ್​ಗಳು ಸಿಗಲ್ಲ. ನಾನೂ ಕೆಲವೊಮ್ಮೆ ಪ್ರಯತ್ನ ಪಟ್ಟಾಗ ಬೆಡ್ ಸಿಕ್ಕಿಲ್ಲ. ಇದಕ್ಕೆ ಏನದರೂ ಪರ್ಯಾಯ ವ್ಯವಸ್ಥೆ ಕುರಿತು ಚರ್ಚೆ ಮಾಡುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here