ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ: ಹೆಚ್ ಡಿ ಕುಮಾರಸ್ವಾಮಿ

0
Spread the love

ರಾಮನಗರಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ, ಏನೂ ಮಾಡಲು ಆಗಲ್ಲ. ನನಗೆ ಯಾರು ಏನೂ ಮಾಡೋಕಾಗಲ್ಲ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು.

Advertisement

ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಇನ್ನೂ ಬರದ ವಿಚಾರವಾಗಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.


Spread the love

LEAVE A REPLY

Please enter your comment!
Please enter your name here