ಆರ್ಸಿಬಿ ತಂಡದಿಂದ ಈ ವರ್ಷ ಏನಾದರೂ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ. ಪ್ರಮುಖ ಸ್ಪೋರ್ಟ್ಸ್ ವೆಬ್ಸೈಟ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಈ ಬಾರಿಯ ಆರ್ಸಿಬಿ ತಂಡವು ಸ್ವಲ್ಪ ಭಿನ್ನವಾಗಿ ಕಾಣಿಸುತ್ತಿದೆ. ಅದರಲ್ಲೂ ತಂಡ ಅದ್ಭುತವಾಗಿದೆ ಎಂದೆನಿಸುತ್ತಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ತುಂಬಾ ವಿಶೇಷವಾಗಿದ್ದು, ಏನೋ ಸಾಧಿಸುವ ಹಂಬಲ ಆರ್ಸಿಬಿ ತಂಡದಲ್ಲಿ ಕಾಣಿಸುತ್ತಿದೆ. ಹೀಗಾಗಿ ಆರ್ಸಿಬಿ ತಂಡದಿಂದ ಈ ವರ್ಷ ಏನಾದರೂ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
ಇದಕ್ಕೂ ಮುನ್ನ ಅಂಬಾಟಿ ರಾಯುಡು, ಈ ಬಾರಿ ಆರ್ಸಿಬಿ ಕಪ್ ಗೆಲ್ಲಬಾರದು ಎಂದಿದ್ದರು. ಅಲ್ಲದೆ ಆರ್ಸಿಬಿ ತಂಡದ ಸೋಲಿಗೆ ಅವರ ತಂಡದ ಆಯ್ಕೆಯೇ ಕಾರಣ ಎಂದು ದೂರಿದ್ದರು. ಆದರೀಗ ಆರ್ಸಿಬಿ ತಂಡ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆಲ್ಲುತ್ತಿದ್ದಂತೆ ರಾಯುಡು ತಮ್ಮ ವರಸೆಯನ್ನು ಬದಲಿಸಿದ್ದಾರೆ.