ಕಾಂಗ್ರೆಸ್ ಕಳ್ಳತನ ಬಯಲಿಗೆ ಬಂದಾಗ ಕೋವಿಡ್ ನೆನಪಾಗಿದೆ: ಸಚಿವ ಪ್ರಹ್ಲಾದ ಜೋಶಿ ಟೀಕೆ..!

0
Spread the love

ಹುಬ್ಬಳ್ಳಿ: ನಾವು ಕಾಂಗ್ರೆಸ್ಸಿನವರ ಕಳ್ಳತನ ಪ್ರಕರಣ ಬಯಲಿಗೆ ತಂದಿದ್ದೇವೆ. ಆದರೆ ಕಾಂಗ್ರೆಸ್ಸಿಗರು, ತಮ್ಮ ಕಳ್ಳತನ ಮುಚ್ಚಿ ಹಾಕಲು ಬೇರೆಯವರನ್ನು ಕಳ್ಳರು ಎಂದು ಬಿಂಬಿಸಲು ಕೋವಿಡ್ ಸ್ಕ್ಯಾಮ್ ಅಂತ ಬಿಂಬಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ ಮಾಡಿದರು.

Advertisement

ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಂದೂವರೆ ವರ್ಷ ಬಿಟ್ಟು ಈಗ ಯಾಕೆ ಕೋವಿಡ್ ಹಗರಣದ ತನಿಖೆ..? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರೆ ವರ್ಷವಾಗಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ವರದಿಯನ್ನು ಹೊರಗೆ ಬಿಟ್ಟಿದ್ದಾರೆ. 2021-22 ರ ವರದಿ ಇದಾಗಿದೆ. ಇಲ್ಲಿಯವರೆಗೂ ಯಾಕೆ ಬಿಡುಗಡೆ ಮಾಡಿರಲಿಲ್ಲ..? ನೀವು ಕಳ್ಳತನ ಮಾಡಿದಾಗ ನಿಮ್ಮನ್ನು ಹಿಡಿದಾಗ ಇನ್ನೊಬ್ಬರ ಮೇಲೆ ಗೂಬೆ ಕೂರಿಸೋ ಯತ್ನ ಅವರೂ ಕಳ್ಳತನ ಮಾಡಿದ್ದಾರೆ ಅಂತ ಬಿಂಬಿಸಿ ಬಚಾವಾಗೋ ಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೆಲ್ಲವೂ ನಡೆಯೋದಿಲ್ಲ ಅವರು ಏನು ತನಿಖೆ ಮಾಡ್ತಾರೋ ಮಾಡಲಿ ಹಿಂದೆ ಆರೋಗ್ಯ ಸಚಿವರಾಗಿದ್ದ ಸುಧಾಕರ್ ಅವರೇ ಹೇಳಿದ್ದಾರೆ. ಏನು ಬೇಕಾದರೂ ತನಿಖೆ ಮಾಡಿ ನನಗೇನು ಭಯ ಇಲ್ಲ ಅಂತ ಹೇಳಿದ್ದಾರೆ. ವಿಜಯೇಂದ್ರ ಅಶೋಕ ಅವರೂ ತನಿಖೆ ಮಾಡಲಿ ಅಂದಿದ್ದಾರೆ. ಜನಾರ್ದನ್ ರೆಡ್ಡಿ ಪ್ರಕರಣದಿಂದ ಹಿಡಿದು ಎಲ್ಲವೂ ಮುಡಾ ಹಗರಣ ಆದ ನಂತರ ಶುರುವಾಗಿವೆ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದರು.


Spread the love

LEAVE A REPLY

Please enter your comment!
Please enter your name here