ನನಗೆ ಇಂಥ ಸ್ಥಿತಿ ಎದುರಾದಾಗ ಸಚಿವ ಸ್ಥಾನ ಬಿಟ್ಟು ಪಕ್ಷದ ಅಧ್ಯಕ್ಷಗಿರಿ ಆಯ್ದುಕೊಂಡಿದ್ದೆ: ಜಿ ಪರಮೇಶ್ವರ್

0
Spread the love

ಬೆಂಗಳೂರು: ನನಗೆ ಇಂಥ ಸ್ಥಿತಿ ಎದುರಾದಾಗ ಸಚಿವ ಸ್ಥಾನ ಬಿಟ್ಟು ಪಕ್ಷದ ಅಧ್ಯಕ್ಷಗಿರಿ ಆಯ್ದುಕೊಂಡಿದ್ದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಮಾತನಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

Advertisement

ಡಿಕೆ ಶಿವಕುಮಾರ್‌ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ಅವರಿಗೆ ಪಕ್ಷ ಸಂಘಟನೆಯ ಒತ್ತಡವೂ ಇದೆ. ನಾನು ಹಿಂದೆ ಅಧ್ಯಕ್ಷಗಿರಿಗಾಗಿ ಸಚಿವ ಸ್ಥಾನ ಬಿಟ್ಟುಕೊಟ್ಟಿದ್ದೆ ಎಂದು ಹೇಳುವ ಮೂಲಕ ಒಂದು ಒಂದು ಹುದ್ದೆಯ ಪರ ಬ್ಯಾಟ್‌ ಬೀಸಿದ್ದಾರೆ.

ಅಂದು ನನಗೆ ಮಂತ್ರಿ ಅಥವಾ ಅಧ್ಯಕ್ಷಗಿರಿ ಪೈಕಿ ಒಂದು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದರು. ನಾನು ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡಿದ್ದೆ. ಶಿವಕುಮಾರ್‌ ಈಗ ಡಿಸಿಎಂ ಮತ್ತು ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಾಬ್ದಾರಿ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡ್ತಾರೋ ನೋಡಬೇಕು ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here