RSS ಬ್ಯಾನ್ ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ?: ಸಚಿವ ಪ್ರಿಯಾಂಕ್‌ ಖರ್ಗೆ

0
Spread the love

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

Advertisement

ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? ಅಂತ ಪ್ರಶ್ನೆ ಮಾಡಿದ್ದಾರೆ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದರಲ್ಲೇ ಮುನಿರತ್ನ ಗಣವೇಶ ಹಾಕಿಕೊಂಡು, ಗಾಂಧಿಜಿ ಫೋಟೋ ಹಿಡಿದುಕೊಂಡು ಪ್ರತಿಭಟಿಸಿದ್ದು ಹಸ್ಯಾಸ್ಪದ ಅವರಿಗೆ ಆರ್‌ಎಸ್‌ಎಸ್ ಇತಿಹಾಸ ಗೊತ್ತಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಗೃಹ ಸಚಿವರಾಗಿದ್ದಾಗ ಆರ್‌ಎಸ್‌ಎಸ್ ಕಚೇರಿಗೆ ಹೋಗಿದ್ದಾರೆ ಅಂತ ಫೋಟೋ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೃಹ ಸಚಿವರಾಗಿ ಅವರು ಅಲ್ಲಿ ಹೋಗಿ ತಾಕೀತು ಮಾಡಿದ್ದರು. ಶಿವಾಜಿನಗರ ಸೆನ್ಸಿಟಿವ್ ಏರಿಯಾ ಇಲ್ಲಿ ಬಾಲ ಬಿಚ್ಚಿದ್ರೆ ಹುಷಾರ್ ಅಂತ ಮುಖದ ಮೇಲೆ ಉಗಿದಿದ್ದಾರೆ. ಅದನ್ನ ಹೇಳಲ್ಲ ಇವರು ಅಂದಿನ ಪೊಲೀಸ್ ಅಧಿಕಾರಿಗಳ ಜೊತೆಗೆ ಹೋಗಿದ್ದರು, ಶಾಖೆಗೆ ಹೋಗಿದ್ದಲ್ಲ ತಾಕೀತು ಮಾಡೋಕೆ ಹೋಗಿದ್ದು ಅಂತ ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here