ಅಧಿಕಾರ ಇರಲಿ ಇರದೇ ಹೋಗಲಿ ಸಾಮಾಜಿಕ ನ್ಯಾಯದಲ್ಲಿ ನಾನು ರಾಜೀ ಆಗೊಲ್ಲ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ನಾನು ಏನು ತಪ್ಪು ಮಾಡದೇ ಹೋದರು ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂತ ಮಾತಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ಇಡೋ ಪ್ರಯತ್ನ ಮಾಡ್ತಿದ್ದಾರೆ. ನಾನು ಏನು ತಪ್ಪು ಮಾಡದೇ ಹೋದರು ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂತ ಮಾತಾಡ್ತಿದ್ದಾರೆ.

Advertisement

ಅದಕ್ಕೆ ಕೆಲವರು ತಮಟೆ ಹೊಡೆಯುತ್ತಿದ್ದಾರೆ‌. ಇದು ನನ್ನ ವಿರುದ್ದ ಮಾಡ್ತಿರೋ ಷಡ್ಯಂತ್ರ. ಇಂತಹ ಷಡ್ಯಂತ್ರಗಳನ್ನ ನಾವೆಲ್ಲ ಒಂದಾಗಿ ವಿರೋಧ ಮಾಡಬೇಕು. ಇಲ್ಲದೆ ಹೋದರೆ ನ್ಯಾಯ ಸಿಗೊಲ್ಲ ಎಂದು ಜನರಿಗೆ ಕರೆ ನೀಡಿದರು. ದೇವರಾಜ ಅರಸು ಮತ್ತು ರಾಜೀವ್ ಗಾಂಧಿ ಸಾಮಾಜಿಕ ‌ನ್ಯಾಯದ ಪರ‌ ಕೆಲಸ ಮಾಡಿದ್ದರು. ಇಬ್ಬರ ಹಾದಿಯಲ್ಲಿ ನಡೆಯೋ ಪ್ರಯತ್ನ ಮಾಡ್ತಿದ್ದೇನೆ‌. ಅಧಿಕಾರ ಇರಲಿ ಇರದೇ ಹೋಗಲಿ ಸಾಮಾಜಿಕ ನ್ಯಾಯದಲ್ಲಿ ನಾನು ರಾಜೀ ಆಗೊಲ್ಲ ಎಂದು ವಿರೋಧಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here