ವಕ್ಫ್ ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ: ರಾಮಲಿಂಗಾ ರೆಡ್ಡಿ

0
Spread the love

ಬೆಂಗಳೂರು: ವಕ್ಫ್ ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ನಗರಲದಲಿ ಮಾತನಾಡಿದ ಅವರು, ಈಗಾಗಲೇ ವಕ್ಫ್ ವಿಚಾರವಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ.

Advertisement

ನೋಟಿಸ್ ಕೊಡಲು ಕಾರಣ ಯಾರು ಅಂದರೆ ಅದು ಬಿಜೆಪಿ ಅವರೇ. ಮಗು ಚಿವುಟೋದು ಅವರೇ, ತೊಟ್ಟಿಲು ತೂಗೋದು ಅವರೇ. ಅವರಿಂದಲೇ ನೋಟಿಸ್ ಕೊಟ್ಟಿದ್ದು ಅಲ್ವಾ. ಅದನ್ನು ಈಗ ನಾವು ನಿಲ್ಲಿಸುತ್ತಿದ್ದೇವೆ. ನಾವು ರೈತರ ಪರವಾಗಿ ಇದ್ದೇವೆ ಎಂದು ಕಿಡಿಕಾರಿದರು.

ಇನ್ನೂ ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರೆಲ್ಲಾ ತುಂಬಾ ಆರಾಮಾಗಿದ್ದಾರೆ. ಬಿಜೆಪಿ ಅಧ್ಯಕ್ಷರಿಂದ ಹಿಡಿದು ಎಲ್ಲರೂ ಬಿಡುವಾಗಿದ್ದಾರೆ. ಮುಂದಿನ ಐದು ವರ್ಷ ಕೂಡ ಅವರು ಬಿಡುವಾಗಿ ಇರುತ್ತಾರೆ. ವಿಪಕ್ಷದಲ್ಲೇ ಕೂರುತ್ತಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.


Spread the love

LEAVE A REPLY

Please enter your comment!
Please enter your name here