ಬೆಂಗಳೂರು: ನಗರದ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟಿನಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ನಿವೃತ್ತ ನೌಕರ ನಾಗಲೇಶ್ವರ ರಾವ್ ತನ್ನ ಪತ್ನಿ ಸಧ್ಯಾರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ನಾಗಲೇಶ್ವರ ರಾವ್ ಮತ್ತು ಸಧ್ಯಾ ವಿರ್ಟುಸೊ ಅಪಾರ್ಟ್ಮೆಂಟಿನಲ್ಲಿ ವಾಸವಾಗಿದ್ದರು. ಪ್ರಾಥಮಿಕ ವಿಚಾರಣೆ ವೇಳೆ “ನಾನು ಸತ್ತರೆ ಪತ್ನಿಯನ್ನು ನೋಡಿಕೊಳ್ಳೋವರು ಯಾರು? ಸಂಬಂಧಿಕರು ಇಲ್ಲ, ಆಕೆಯ ಮುಂದಿನ ಜೀವನ ಹೇಗೆ?” ಎಂಬ ಕಾರಣ ನೀಡಿ ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ.
ಆತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ದಂಪತಿಗೆ ಒಬ್ಬ ಮಗಳು ಇದ್ದು, ಆಕೆ ಅಮೆರಿಕದಲ್ಲಿ ನೆಲೆಸಿದ್ದಾಳೆ ಎನ್ನಲಾಗಿದೆ.



