ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು, ಯಾರನ್ನೂ ತುಳಿಯಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

0
Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು, ಯಾರನ್ನೂ ತುಳಿಯಲು ಸಾಧ್ಯವಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು, ಯಾರನ್ನೂ ತುಳಿಯಲು ಸಾಧ್ಯವಿಲ್ಲ.

Advertisement

ಸತೀಶ್ ಜಾರಕಿಹೋಳಿ ಹಿರಿಯ ನಾಯಕರು. ಶ್ರೀರಾಮುಲು ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬರ್ತಾರೆ ಅಂತ ಇತ್ತು. ಒಬ್ಬರನ್ನ ತುಳಿದು ರಾಜಕೀಯ ಮಾಡೋದು ಕಾಂಗ್ರೆಸ್ ನಲ್ಲಿ ಇಲ್ಲ. ಇದು ನಡೆಯೋದು ಬಿಜೆಪಿಯಲ್ಲಿ ಮಾತ್ರ ಎಂದಿದ್ದಾರೆ.

ಜನಾರ್ದನ ರೆಡ್ಡಿಗೆ ಮೊದಲು ಅವರ ಪಕ್ಷ ಸರಿ ಮಾಡಿಕೊಳ್ಳೋಕೆ ಹೇಳಿ. ಮೊದಲು ಯತ್ನಾಳ್, ಜಾರಕಿಹೋಳಿಯನ್ನು ಸರಿ ಮಾಡಿ, ಅಮೇಲೆ ಮಾತಾಡಲಿ. ನಿತ್ಯ ವಿಜಯೇಂದ್ರ ಬಗ್ಗೆ ಮಾತಾಡ್ತಿದ್ದಾರೆ.

ಅವರ ವಿರುದ್ಧ ಕ್ರಮ ತೆಗೆದುಕೊಳ್ಳೋಕೆ ಬಿಜೆಪಿ ಹೈಕಮಾಂಡ್‌ಗೆ ಆಗಿಲ್ಲ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಅಲ್ಲದೇ ಎಐಸಿಸಿ ಭದ್ರವಾಗಿದೆ‌. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ನಾವು ಸುಮ್ಮನೆ ಇದ್ದೇವೆ. ಮೊದಲು ಬಿಜೆಪಿ ತಟ್ಟೆ ಸರಿ ಮಾಡಿಕೊಳ್ಳಲಿ. ಅಮೇಲೆ ನಮ್ಮ ತಟ್ಟೆಗೆ ಬನ್ನಿ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here