ಉಡುಪಿ:- ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತ್ನಿ ಹೆಚ್ಚು ಸಮಯ ಮೊಬೈಲ್ ಬಳಸುತ್ತಾಳೆ ಎಂದು ಪತಿ ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಜರುಗಿದೆ. ರೇಖಾ ಹತ್ಯೆಯಾದ ಮಹಿಳೆ. ಗಣೇಶ್ ಪೂಜಾರಿ ಬಂಧಿತ ಆರೋಪಿ.
Advertisement
ಹೆಂಡತಿ ಹೆಚ್ಚಿನ ಸಮಯ ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ, ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ, ಆರೋಪಿ ಕತ್ತಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ.
ಇನ್ನೂ ಆರೋಪಿ ವಿಪರೀತ ಮಧ್ಯ ವ್ಯಸನಿಯಾಗಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.