ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿದ್ದಾರೆ. ಅವರು ಜೈಲಿನಲ್ಲಿ ಸೊರಗಿ ಹೋಗಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಅವರನ್ನು ನೋಡಿಬಂದ ಅನೇಕರು ಕಣ್ಣೀರು ಹಾಕಿದ್ದರು. ಇದೆಲ್ಲವೂ ಸುಳ್ಳು ಅನ್ನೋದು ಸ್ಪಷ್ಟವಾಗಿದೆ. ದರ್ಶನ್ ಜೈಲಿನಲ್ಲಿ ಹಾಯಾಗಿಯೇ ಇದ್ದಾರೆ. ದರ್ಶನ್ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ದರ್ಶನ್ ಹಾಗೂ ಅವರ ತಂಡವನ್ನು ಬೇರೆ ಜೈಲ್ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪರಪ್ಪನ ಜೈಲಿನಲ್ಲಿರುವ ದರ್ಶನ್ ಸೇರಿ ಇತರರನ್ನು ಸ್ಥಳಾಂತರ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಡಿಜಿಐಜಿಪಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ದರ್ಶನ್ರನ್ನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಇಂದು ಸಂಜೆಯೊಳಗೆ ದರ್ಶನ್ ಶಿಫ್ಟ್ ಮಾಡುವ ಕುರಿತು ಮಾಹಿತಿ ಹೊರ ಬೀಳಬಹುದು.
ಇನ್ನು ದರ್ಶನ್ರನ್ನ ಹಿಂಡಲಗಾ ಜೈಲಿಗೆ ಕಳುಹಿಸುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಕೋಕಾ ಕಾಯ್ದೆಯಡಿ ಇರುವವರನ್ನ ಶಿಫ್ಟ್ ಮಾಡಲು ಬೆಂಗಳೂರು ಪೊಲೀಸರು ಪತ್ರ ಬರೆದಿದ್ದಾರೆ. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನ ಸ್ಥಳಾಂತರ ಮಾಡುವ ಸಾಧ್ಯತೆ ದಟ್ಟವಾಗಿದೆ. ಆದರೆ ಜೈಲು ಅಧಿಕಾರಿಗಳು ಕಾನೂನು ವಿಚಾರವಾಗಿ ಚರ್ಚೆ ಮಾಡುತ್ತಿದ್ದಾರೆ.