ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ʼಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಬ್ರಾಹಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ, ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ದಾರೆ. ಕಳೆದ ಬಾರಿ ಕೇಳಿದ ದಾಖಲೆಗಳ ಬಗ್ಗೆ ಮತ್ತೆ ಮಾತಾಡಿದ್ದು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಹಾಕಿದ ಪ್ರಾಸಿಕ್ಯೂಷನ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಕೊಟ್ಟಿದ್ದರು.
ಆದ್ರೆ, 3 ಗಂಟೆ ಕ್ಯಾಬಿನೆಟ್ ಸಭೆ ನಡೆಸಿ ಗರ್ವನರ್ ನೋಟಿಸ್ ಕೊಟ್ಟಿದ್ದು ತಪ್ಪು ಅಂತಾರೆ. ಟಿ. ಜೆ ಅಬ್ರಹಾಂ ಸರಿಯಿಲ್ಲ ಅಂತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಸರಿಯಿದೆ, ಆದರೆ ಟಿ.ಜೆ ಅಬ್ರಹಂ ಸರಿಯಲ್ಲ ಅಂತಾರೆ. ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ರು. ಕಳೆದ ಬಾರಿ ಕೇಳಿದ ದಾಖಲೆಗಳ ಬಗ್ಗೆ ಮತ್ತೆ ಚರ್ಚೆ ಮಾಡಿದ್ದು, ಪ್ರಾಸಿಕ್ಯೂಷನ್ಗೆ ಕೊಟ್ಟೇ ಕೊಡುತ್ತಾರೆ ಎನ್ನುವ ವಿಶ್ವಾಸನ ನನಗೆ ಇದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.