ಅಕ್ರಮ ತಾಣವಾಗುತ್ತಿದ್ಯಾ ಮಾದಪ್ಫನ ಬೆಟ್ಟ? ಹೆಚ್ಚಿದ ಗಾಂಜಾ ಘಾಟು, ಎಲ್ಲೆಂದರಲ್ಲಿ ಬಿದ್ದಿವೆ ಮದ್ಯದ ಪೌಚ್!

0
Spread the love

ಚಾಮರಾಜನಗರ:- ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಾಂಜಾ ಘಮಲು ಹೆಚ್ಚಾಗಿದ್ದು, ಪ್ರಾಧಿಕಾರದ ನಡೆಗೆ ಭಕ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಹಿಂಭಾಗದ ಖಾಲಿ ಜಾಗ ಗಾಂಜಾ ಅಡ್ಡೆಯಾಗಿ ಬದಲಾವಣೆಯಾಗಿದೆ. ಯಾರಿಗೂ ತಿಳಿಯದ ಹಾಗೆ ಗಾಂಜಾ ಸೇದಲೂ ಯುವಕರು ಬಳಸಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ಆದರೂ ಪ್ರಾಧಿಕಾರ ಅಥವಾ ಅಬಕಾರಿ ಇಲಾಖೆ ಆಗಲೀ ತಲೆ ಕೆಡಿಸಿಕೊಂಡಿಲ್ಲ.

Advertisement

ಗಾಂಜಾ ಅಷ್ಟೇ ಅಲ್ಲದೆ ಮದ್ಯದ ಪೌಚ್​ಗಳು ಎಲ್ಲೆಂದರಲ್ಲಿ ಬಿದ್ದಿವೆ. ಮದ್ಯ ಮುಕ್ತ ಮಹದೇಶ್ವರ ಬೆಟ್ಟಕ್ಕೆ ಸೂಚನೆ ನೀಡಿದ್ದ ಸಿಎಂ ಸಿದ್ಧರಾಮಯ್ಯ,ಕ್ಯಾಬಿನೆಟ್ ಮೀಟಿಂಗ್​ನಲ್ಲಿಯೂ ಪ್ರಾಧಿಕಾರದ ಕಾರ್ಯದರ್ಶಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಆದರೂ ಸಮಸ್ಯೆ ಬಗೆಹರಿದಿಲ್ಲ. ಪ್ರಾಧಿಕಾರದ ಅಧಿಕಾರಿಗಳ ಶಾಮೀಲಿಂದಲೇ ಮದ್ಯ ಸಾಗಾಟ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಪಾವಿತ್ರ್ಯ ಕಾಪಾಡುವಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕೂಡ ಸಂಪೂರ್ಣ ವಿಫಲರಾಗಿದ್ದಾರೆ. ಪ್ರಾಧಿಕಾರ ಕಾಟಾಚಾರಕ್ಕೆ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here