ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ CBIಗೆ ವರ್ಗಾವಣೆ ಆಗುತ್ತಾ? ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

0
Spread the love

ಬೆಂಗಳೂರು:- ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು CBI ಗೆ ವಹಿಸುವಂತೆ ವಿಪಕ್ಷ ಆಗ್ರಹ ವಿಚಾರವಾಗಿ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯ ಏನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಏನಾದರೂ ಲೋಪಗಳಾಗಿದ್ದರೆ ಗೊತ್ತಾಗುತ್ತದೆ. ಆಗ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಶಾಸಕರ ಹೆಸರನ್ನು ಬಿಜೆಪಿಯವರು ಹೇಳುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರು ಬಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಶಾಸಕರ ಹೆಸರಿದೆ ಅಂತಿದ್ದಾರೆ. ಎಲ್ಲವನ್ನೂ ನೋಡುತ್ತೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here