ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಕ್ರಾಸ್ ಬಳಿ ಮಹಿಳೆಯೋರ್ವರ ಮನೆಯಲ್ಲಿ ಕಳ್ಳತನ ನಡೆದಿದೆ.
ವೀರಮ್ಮ ಅವರ ಮನೆಗೆ ನುಗ್ಗಿದ ಕಳ್ಳ, ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿ ಎಸ್ಕೇಪ್ ಆಗಿದ್ದ. ಮಹಿಳೆ ಪತಿ ಉಮಾಪತಿ ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ನವೀನ್ ಎಂದು ಗುರುತಿಸಲಾಗಿದೆ. ಅಚ್ಚರಿ ಸಂಗತಿ ಅಂದ್ರೆ, ಹಲ್ಲೆಗೊಳಗಾದ ವೀರಮ್ಮ ಅವರ ತಂಗಿ ಮಗನಿಂದಲೇ ಈ ಕೃತ್ಯ ನಡೆದಿದೆ. ಆರೋಪಿ ಹಣಕ್ಕಾಗಿ ಈ ಕೃತ್ಯ ಎಸಗಿರುವುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
ಘಟನೆಯಲ್ಲಿ ವೀರಮ್ಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.



