ಮಂಡ್ಯ: ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

0
Spread the love

ಮಂಡ್ಯ: ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ.

Advertisement

ಮಹಿಳೆ ವೇಗವಾಗಿ ಬಂದ ಬಸ್‌ನಿಂದಾಗಿ ಗಾಬರಿಗೊಂಡ ಪರಿಣಾಮ ಚಕ್ರಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಘಟನಾ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here