ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ನಟ ಅಲ್ಲು ಅರ್ಜುನ್ʼಗೆ 14 ದಿನ ನ್ಯಾಯಾಂಗ ಬಂಧನ

0
Spread the love

ಹೈದರಾಬಾದ್:  ‘ಪುಷ್ಪ 2’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದ ನಟ ಅಲ್ಲು ಅರ್ಜುನ್ ಶಾಕ್ ಎದುರಾಗಿದೆ. ಟಾಲಿವುಡ್​ನ ಸ್ಟಾರ್ ನಟ ಅಲ್ಲು ಅರ್ಜುನ್ ಬಂಧನ ಸಂಚಲನ ಮೂಡಿಸಿದೆ. ಇದೀಗ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ ಆದೇಶ ನೀಡಿದೆ.

Advertisement

‘ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್, ಈಗ ಜೈಲು ಪಾಲಾಗಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ನ್ಯಾಯಾಂಗ ಬಂಧನ ನೀಡಿರುವುದು ಕೆಳ ಹಂತದ ಕೋರ್ಟ್. ಅವರು ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here