ವಿಜಯಪುರ: ನಗರದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಸರಗಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಬಂಧಿತರು.ಇತ್ತೀಚಿಗಷ್ಟೇ ವಿಜಯಪುರ ನಗರದ ಮಹಿಳೆಯೊಬ್ಬರು ದಿವಟಗೇರಿ ಬಡವಾಣೆಯಲ್ಲಿನ ಅಂಗಡಿಗೆ ತೆರಳಿದ್ದರು. ಆಗ ಆರೋಪಿಗಳಿಬ್ಬರು ಏಕಾಏಕಿ ಕಲಾವತಿ ಮೇಲೆ ಹಲ್ಲೆಗೈದು, ಕಿವಿ ಕತ್ತರಿಸಿದ್ದರು. ಬಳಿಕ ಕಿವಿಯಲ್ಲಿದ್ದ ಓಲೆ ಹಾಗೂ ಕತ್ತಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೋಲೀಸರು, ಇಬ್ಬರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.



