ಪುರುಷರಷ್ಟೇ ಮಹಿಳೆಯರೂ ಸಮಾನರು

0
shivanubhava
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಬಸವಾದಿ ಶರಣರ ಕಾಲದಲ್ಲಿ ನೂರಾರು ಶರಣೆಯರು ವಚನಕಾರ್ತಿಯರಾಗಿದ್ದರು. ಪುರುಷರಷ್ಟೇ ಮಹಿಳೆಯರೂ ಸಮಾನರು ಎಂಬ ತತ್ವ-ಸಿದ್ಧಾಂತ ಬಸವಾದಿ ಶಿವಶರಣರ ಕಾಲದಿಂದಲೂ ಬಂದಿದೆ ಎಂದು ಭೈರನಹಟ್ಟಿಯ ಪೂಜ್ಯ ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು.

Advertisement

ಅವರು ಲಿಂಗಾಯತ ಪ್ರಗತಿಶೀಲ ಸಂಘದ 2685 ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಎಲ್ಲಾ ಶರಣೆಯರು ಅನುಭವ ಮಂಟಪದಲ್ಲಿ ಪಾಲ್ಗೊಳ್ಳುತ್ತಿದ್ದರು. ಬಸವಾದಿ ಶಿವಶರಣರ ನಂತರ ಕೆಲವು ಕಾಲ ಸ್ತಬ್ಧವಾಗಿದ್ದ ವಚನಸಾಹಿತ್ಯವನ್ನು 15ನೇ ಶತಮಾನದಲ್ಲಿ ತೋಂಟದ ಸಿದ್ಧಲಿಂಗ ಶಿವಯೋಗಿಗಳು ಮುಂದುವರಿಸಿಕೊಂಡು ಬಂದರು ಎಂದು ಹೇಳಿದರು.

ಅನಾಥ ಶವಗಳಿಗೆ ಸಂಸ್ಕಾರ ಮಾಡುವ ಕಾಯಕದಲ್ಲಿ ನಿರತರಾದ ಆಶಾ ಸ್ವಾಮಿಯವರನ್ನು ಸನ್ಮಾನಿಸಲಾಯಿತು. ಶಿವಾನುಭವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ವಾರ್ಷಿಕೋತ್ಸವ ಆಚರಿಸಲಾಯಿತು. ಅಕ್ಕಮಹಾದೇವಿ ಯೋಗವಿಜ್ಞಾನ ಕೇಂದ್ರದ ಸದಸ್ಯರು ಯೋಗನೃತ್ಯ ಮಾಡಿದರು. ಜೆ.ಸಿ. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ತನ್ವಿ ರಾಮಚಂದ್ರ ಮೋನೆ ವಚನ ಸಂಗೀತ ಹಾಡಿದರು. ಗುರುನಾಥ ಸುತಾರ ಮತ್ತು ಪ್ರಸಾದ ಸುತಾರ ತಬಲಾ ಮತ್ತು ಹಾರ್ಮೋನಿಯಮ್ ಸಾಥ್ ನೀಡಿದರು.

ಧರ್ಮಗ್ರಂಥ ಪಠಣವನ್ನು ರೇಣುಕಾ ಅಮಾತ್ಯ, ವಚನ ಚಿಂತನೆಯನ್ನು ಜಯಶ್ರೀ ಉಗಲಾಟದ ಮಾಡಿದರು. ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಿಕೊಂಡಿದ್ದ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದವರನ್ನು ಪೂಜ್ಯರು ಸನ್ಮಾನಿಸಿದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ.ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರೂಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ, ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರ್‌ಮನ್ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.

ಮಹಿಳೆಯರ ಸಮಸ್ಯೆ-ಸವಾಲುಗಳ ಕುರಿತು ಸಾಮಾಜಿಕ ಕಾರ್ಯಕರ್ತೆ ಸಾವಿತ್ರಿ ಮುಜುಮದಾರ ಉಪನ್ಯಾಸ ನೀಡಿದರು. ಪ್ರತಿದಿನವೂ ಮಹಿಳೆಯರನ್ನು ಗೌರವಿಸಬೇಕು. 12ನೇ ಶತಮಾನದ ಪ್ರಾರಂಭದಲ್ಲಿ ಮಹಿಳೆಯರನ್ನು ಅತ್ಯಂತ ಹೀನವಾಗಿ, ಕ್ರೌರ್ಯದಿಂದ ನೋಡುವ ಪರಿಸ್ಥಿತಿ ಇತ್ತು. ಮಹಿಳೆಯರನ್ನು ವ್ಯಕ್ತಿಯಾಗಿ ಕಾಣದೇ, ವಸ್ತುವಾಗಿ ನೋಡುತ್ತಿದ್ದರು. ಇಂತಹ ಕಷ್ಟದ ಸನ್ನಿವೇಶದಲ್ಲಿ ಮಹಿಳೆಯರಿಗೆ ಸಮಾನತೆ, ಧ್ವನಿಯನ್ನು ಕೊಟ್ಟವರು ಅಣ್ಣ ಬಸವಣ್ಣನವರು ಎಂದು ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು. 


Spread the love

LEAVE A REPLY

Please enter your comment!
Please enter your name here