HomeKarnataka Newsಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ: ಡಿ.ಕೆ. ಶಿವಕುಮಾರ್ ಸಲಹೆ

ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ: ಡಿ.ಕೆ. ಶಿವಕುಮಾರ್ ಸಲಹೆ

For Dai;y Updates Join Our whatsapp Group

Spread the love

ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ.

ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು.

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು

“ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ” ಎಂದು ಬಣ್ಣಿಸಿದರು.

“ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು. ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ” ಎಂದು ತಿಳಿಸಿದರು.

ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಿ

“ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ” ಎಂದು ಹೇಳಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!