HomeGadag Newsಯೋಜನೆಗಳ ಅನುಷ್ಠಾನಕ್ಕಾಗಿ ಆಸಕ್ತಿಯಿಂದ ಕೆಲಸ ಮಾಡಿ: ಬಿ.ಬಿ. ಅಸೂಟಿ

ಯೋಜನೆಗಳ ಅನುಷ್ಠಾನಕ್ಕಾಗಿ ಆಸಕ್ತಿಯಿಂದ ಕೆಲಸ ಮಾಡಿ: ಬಿ.ಬಿ. ಅಸೂಟಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.

ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ. ಪಂಚ ಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಥೈಸಿಕೊಂಡು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಸಂಬಂಧಿತ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸಾರ್ವಜನಿಕರ ಸುರಕ್ಷತೆಗಾಗಿ ಗದಗ ಹೊಸ ಬಸ್ ನಿಲ್ದಾಣದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದ್ದು, ಅವುಗಳು ವ್ಯವಸ್ಥಿತವಾಗಿರುವ ಕುರಿತು ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಬಡಜನರ ಹಸಿವು ನೀಗಿಸುವಲ್ಲಿ ಅನ್ನಭಾಗ್ಯ ಯೋಜನೆಯ ಪಾತ್ರ ಮಹತ್ವದ್ದಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿಯು ಕಳ್ಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಬಿ. ಅಳಗವಾಡಿ ಮಾತನಾಡಿ, ಪಡಿತರ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಮರ್ಪಕ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಣೆಯಾಗುತ್ತಿರುವ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಬೇಕು ಎಂದರು.

ಪಂಚಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಡಿಸೆಂಬರ್ 2025ರವರೆಗೆ 249353 ನೋಂದಣಿಯಾದ ಅರ್ಜಿಗಳ ಪೈಕಿ 249353 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ವಾಕರಸಾ ಸಂಸ್ಥೆಯಿಂದ 11-6-2023ರಿಂದ 4-1-2026ರವರೆಗೆ 13.75 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಫೆಬ್ರುವರಿ 2025ರಿಂದ ಡಿಸೆಂಬರ್ 2025ರವರೆಗೆ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳ ಹಂಚಿಕೆಯಡಿ ಜಿಲ್ಲೆಯಲ್ಲಿ 4,33,927 ಕ್ವಿಂಟಾಲ್ ಅಕ್ಕಿ ಹಂಚಿಕೆಯಾಗಿದೆ.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಜನವರಿ 2024ರಿಂದ ಸೆಪ್ಟೆಂಬರ್ 2025ರವರೆಗೆ 6356 ಅರ್ಜಿಗಳು ಸ್ವೀಕೃತವಾಗಿರುತ್ತವೆ. ಆ ಪೈಕಿ 4048 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆಯಾಗಿರುತ್ತದೆ. ಬಾಕಿ ಉಳಿದಿರುವ 2308 ಅಭ್ಯರ್ಥಿಗಳು ಯುವನಿಧಿ ಯೋಜನೆಯ ಷರತ್ತುಗಳಿಗೆ ಹಂತ ಹಂತವಾಗಿ ಅರ್ಹರಾಗುತ್ತಾರೆ. ಗೃಹ ಜ್ಯೋತಿ ಯೋಜನೆಯಡಿ ಒಟ್ಟು 278395 ಸ್ಥಾವರಗಳ ಪೈಕಿ 274242 ಸ್ಥಾವರಗಳು ನೋಂದಣಿಯಾಗಿವೆ.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿ.ಪಂ ಯೋಜನಾ ನಿರ್ದೇಶಕ ಎಂ.ಎಸ್. ಚಳಗೇರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಫಕ್ರುಸಾಬ ಚಿಕ್ಕಮಣ್ಣೂರ, ಸದಸ್ಯರಾದ ಶರಣಪ್ಪ ಬೆಟಗೇರಿ, ಶರೀಫ್ ಬಿಳಿಯಲಿ, ನಾಗರಾಜ ಶಿವಪ್ಪ ಮಡಿವಾಳರ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ಈಶಣ್ಣ ಹುಣಸೀಕಟ್ಟಿ, ಗೀತಾ ಸುರೇಶ ಬೀರಣ್ಣವರ, ವೀರಯ್ಯ ಮಠಪತಿ, ಆರ್.ಆರ್. ಗಡ್ಡದ್ದೇವರಮಠ, ಗ್ಯಾರಂಟಿ ಯೋಜನೆಗೆ ಸಂಬಂಧಿತ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬಸ್ ನಿಲ್ದಾಣಗಳ ಸ್ವಚ್ಛತೆ ಮುಖ್ಯವಾಗಿದ್ದು, ಬಸ್ ನಿಲ್ದಾಣದ ಆವರಣ ಸ್ವಚ್ಛವಾಗಿರುವಂತೆ ಹಾಗೂ ಅಲ್ಲಿ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!