ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ಬಿಂಕದಕಟ್ಟಿಯ ಶ್ರೀ ರಾಮಕರುಣಾನಂದ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
Advertisement
ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ವಿ.ಡಿ. ರಂಗಪ್ಪನವರು, ಪೋಷಕರಾದ ರಾಜೇಂದ್ರ ಮುಧೋಳ್, ರೇಣುಕಾ ಎಸ್.ಕೊಳ್ಳಿ, ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಕೆ.ಆರ್ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು. ಶಾಲೆಯ ಮಕ್ಕಳಿಂದ ಊರಿನ ಬೀದಿಗಳಲ್ಲಿ ಸಂಚರಿಸಿ ಪರಿಸರ ಸಂರಕ್ಷಣೆ ಬಗ್ಗೆ ಜಾಥಾ ನಡೆಸಲಾಯಿತು.
ಅಕ್ಕಮ್ಮ ಹರಿಜನ ಸ್ವಾಗತಿಸಿದರು. ಸಮೀನಾ ಕಾರ್ಯಕ್ರಮ ನಿರೂಪಿಸಿದರು. ನಾಗರತ್ನ ಮರೆಕರ್ ಪರಿಸರ ದಿನಾಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಿದರು. ಶ್ರುತಿ ಬ್ಯಾಹಟ್ಟಿ ವಂದಿಸಿದರು.