ವಿಶ್ವ ಜಲ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ನೆಹರು ಯುವ ಕೇಂದ್ರ, ಆದರ್ಶ ಶಿಕ್ಷಣ ಸಂಸ್ಥೆಯ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಕುಂಡಿ ಗ್ರಾಮದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

Advertisement

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಎನ್ ರಂಜನಿ ಮಾತನಾಡಿ, ನೀರನ್ನು ಹಿತ-ಮಿತವಾಗಿ ಬಳಸಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರೇಂದ್ರಗೌಡ ಪಾಟೀಲ್ ನೀರಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ರವಿ ಹೊಂಬಾಳೆ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಪ್ರೊ. ಬಾಹುಬಲಿ ಜೈನರ್ ಸೇರಿದಂತೆ ಎಎಸ್‌ಎಸ್ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಸ್ವಯಂ ಸೇವಕರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here